ಒಬ್ಬೊಬ್ಬ ನಿರ್ದೇಶಕರಿಗೆ ಒಂದೊಂದು ತರಹ ಸೆಂಟಿಮೆಂಟು. ಕೆಲವರು 'ಚ' ಕಾರದಲ್ಲೆ ಚಿಲಿಪಿಲಿ ಆಡಿದ್ದಾರೆ.
ಇನ್ನೂ ಕೆಲವರಿಗೆ 'ಮ'ಕಾರದ ಮೇಲೆ ಎಲ್ಲಿಲ್ಲದ ಮಮಕಾರ. ಅದೇ ರೀತಿ ಪಿ ವಾಸು ಅವರಿಗೆ 'ಆ'
ಕಾರದ ಮೇಲೆ ಸೆಂಟಿಮೆಂಟು ಜಾಸ್ತಿ. ಈ ಹಿಂದೆ ಅವರು ಆಪ್ತಮಿತ್ರ, ಆಪ್ತರಕ್ಷಕ ಚಿತ್ರಗಳನ್ನು ತೆರೆಗೆ
ತಂದಿದ್ದರು. ಈಗ ತಮ್ಮ ನೂತನ ಚಿತ್ರಕ್ಕೆ 'ಆರಕ್ಷಕ' ಎಂದು ಹೆಸರಿಟ್ಟಿದ್ದಾರೆ. ಚಿತ್ರದ ನಾಯಕ
ನಟ ಬೇರಾರು ಅಲ್ಲ ನಮ್ಮ ರಿಯಲ್ ಸ್ಟಾರ್ ಉಪೇಂದ್ರ.
ಈಗಾಗಲೆ ಸೆಟ್ಟೇರಿರುವ ಈ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ.
ಉದಯರವಿ ಫಿಲಂಸ್ ಲಾಂಛನದಡಿಯಲ್ಲಿ ಕೃಷ್ಣಪ್ರಜ್ವಲ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್
ಸಂಗೀತ ನೀಡುತ್ತಿದ್ದಾರೆ. ಐದು ಹಾಡುಗಳು ಚಿತ್ರದಲ್ಲಿದೆ. ಈ ಪೈಕಿ ಎರಡು ಹಾಡುಗಳ ಚಿತ್ರೀಕರಣ
ವಿದೇಶದಲ್ಲಿ ನಡೆಯಲಿದೆ.ಮೈಸೂರು, ಕೇರಳ ಹಾಗೂ ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ.
ಸದಾ, ಸೀತಾ, ಶಯಾಜಿ ಶಿಂಧೆ, ರಾಗಿಣಿ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ. ನಿರ್ದೇಶಕರೇ
ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುರೇಶ್ ಅರಸ್ ಸಂಕಲನ, ವೇಣು ಕಲಾ
ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮತ್ತು ಚಂಪಕಧಾಮ ಬಾಬು
ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.
ಇನ್ನೂ ಕೆಲವರಿಗೆ 'ಮ'ಕಾರದ ಮೇಲೆ ಎಲ್ಲಿಲ್ಲದ ಮಮಕಾರ. ಅದೇ ರೀತಿ ಪಿ ವಾಸು ಅವರಿಗೆ 'ಆ'
ಕಾರದ ಮೇಲೆ ಸೆಂಟಿಮೆಂಟು ಜಾಸ್ತಿ. ಈ ಹಿಂದೆ ಅವರು ಆಪ್ತಮಿತ್ರ, ಆಪ್ತರಕ್ಷಕ ಚಿತ್ರಗಳನ್ನು ತೆರೆಗೆ
ತಂದಿದ್ದರು. ಈಗ ತಮ್ಮ ನೂತನ ಚಿತ್ರಕ್ಕೆ 'ಆರಕ್ಷಕ' ಎಂದು ಹೆಸರಿಟ್ಟಿದ್ದಾರೆ. ಚಿತ್ರದ ನಾಯಕ
ನಟ ಬೇರಾರು ಅಲ್ಲ ನಮ್ಮ ರಿಯಲ್ ಸ್ಟಾರ್ ಉಪೇಂದ್ರ.
ಈಗಾಗಲೆ ಸೆಟ್ಟೇರಿರುವ ಈ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ.
ಉದಯರವಿ ಫಿಲಂಸ್ ಲಾಂಛನದಡಿಯಲ್ಲಿ ಕೃಷ್ಣಪ್ರಜ್ವಲ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್
ಸಂಗೀತ ನೀಡುತ್ತಿದ್ದಾರೆ. ಐದು ಹಾಡುಗಳು ಚಿತ್ರದಲ್ಲಿದೆ. ಈ ಪೈಕಿ ಎರಡು ಹಾಡುಗಳ ಚಿತ್ರೀಕರಣ
ವಿದೇಶದಲ್ಲಿ ನಡೆಯಲಿದೆ.ಮೈಸೂರು, ಕೇರಳ ಹಾಗೂ ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ.
ಸದಾ, ಸೀತಾ, ಶಯಾಜಿ ಶಿಂಧೆ, ರಾಗಿಣಿ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ. ನಿರ್ದೇಶಕರೇ
ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುರೇಶ್ ಅರಸ್ ಸಂಕಲನ, ವೇಣು ಕಲಾ
ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮತ್ತು ಚಂಪಕಧಾಮ ಬಾಬು
ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.
No comments:
Post a Comment